WEATHER | ಮುಂದಿನ ಎರಡು ದಿನಗಳ ಕಾಲ ಕರ್ನಾಟಕದಾದ್ಯಂತ ಗರಿಷ್ಠ ಉಷ್ಣಾಂಶ ಹೆಚ್ಚಳ

ಮುಂದಿನ ಎರಡು ದಿನಗಳ ಕಾಲ ಕರ್ನಾಟಕದಾದ್ಯಂತ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಕಂಡುಬರುವುದಿಲ್ಲ, ಎರಡು ದಿನಗಳ ಬಳಿಕ ಗರಿಷ್ಠ ಉಷ್ಣಾಂಶದಲ್ಲಿ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಧಾರವಾಡ, ಕಲಬುರಗಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿದೆ.

ಕನಿಷ್ಠ ತಾಪಮಾನವು ಕರಾವಳಿಯಲ್ಲಿ 23-24 ಡಿಗ್ರಿ ಸೆಲ್ಸಿಯಸ್​ನಷ್ಟಿದೆ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ ಮತ್ತು ಗದಗದಲ್ಲಿ 15-17 ಡಿಗ್ರಿ ಸೆಲ್ಸಿಯಸ್​, ಬೆಂಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ಮಡಿಕೇರಿ, ಮೈಸೂರಿನಲ್ಲಿ 17-19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!