ಸುಪ್ರೀಂ ಕೋರ್ಟ್ ಅಂಗಳದಲ್ಲಿ ನಟ ದರ್ಶನ್ ಕೇಸ್: ಹಿರಿಯ ವಕೀಲ ಕಪಿಲ್ ಸಿಬಲ್ ಜೊತೆ ಚರ್ಚೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಹೈಕೋರ್ಟ್​ನಲ್ಲಿ ಸಿಕ್ಕ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಹಾಗಾಗಿ ದರ್ಶನ್​ ಹಾಗೂ ಇನ್ನುಳಿದ ಆರೋಪಿಗಳಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸುಪ್ರೀಂ ಕೋರ್ಟ್​ನಲ್ಲಿ ತಮ್ಮ ಪರ ವಾದ ಮಾಡಲು ಖ್ಯಾತ ವಕೀಲರನ್ನೇ ದರ್ಶನ್ ಸಂಪರ್ಕಿಸಿದ್ದಾರೆ. ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ಭೇಟಿ ಆಗಿದ್ದಾರೆ.

ಕಪಿಲ್ ಸಿಬಲ್ ಭೇಟಿಯಾಗಿ ಚರ್ಚೆ ನಡೆಸಲಾಗಿದೆ. ಹೈಕೋರ್ಟ್​ನಲ್ಲಿ ನಡೆದ ವಾದ-ಪ್ರತಿವಾದ ಹಾಗೂ ಕೇಸ್ ಹಿಸ್ಟರಿಯ ಮಾಹಿತಿಯನ್ನು ಅವರಿಗೆ ನೀಡಲಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಪರವಾಗಿ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್​ನಲ್ಲಿ ವಾದ ಮಾಡಲಿದ್ದಾರೆ.

ಮಾರ್ಚ್ 18ರಂದು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ವಿಚಾರಣೆ ನಡೆಯಲಿದೆ. ಈಗಾಗಲೇ ಹೈಕೋರ್ಟ್​ನಲ್ಲಿ ಗೆಲುವು ಪಡೆದ ರೀತಿಯೇ ಸುಪ್ರೀಂ ಕೋರ್ಟ್​ನಲ್ಲಿ ಕೂಡ ಗೆಲುವಿಗೆ ದರ್ಶನ್​ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ಖ್ಯಾತ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ನೇಮಿಸಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ಯಾವ ರೀತಿ ತೀರ್ಪು ನೀಡಲಿದೆ ಎಂಬುದರ ಮೇಲೆ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳ ಭವಿಷ್ಯ ನಿರ್ಧಾರ ಆಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!