ಹೊಟೇಲ್ ಸಿಬ್ಬಂದಿಯ ಮೇಲೆ ಹಲ್ಲೆ ಆರೋಪ: ಭೀಮಾ ಜ್ಯುವೆಲ್ಲರ್ಸ್ ಮಾಲೀಕನ ಪುತ್ರ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಟೇಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇಲೆ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಫೆಬ್ರವರಿ 7ರಂದು ಹೊಟೇಲ್ ಬಳಿ ಗಲಾಟೆ ಮಾಡಿದ್ದರು. ಆ ಬಳಿಕ ಫೆಬ್ರವರಿ 26ರ ನಿನ್ನೆ ಕೂಡ ಹೊಟೇಲ್ ಬಳಿಗೆ ಬಂದು ವಿನಾಕಾರಣ ಜಗಳಕ್ಕೆ ಇಳಿದಿದ್ದರು. ಜಗಳದ ವೇಳೆಯಲ್ಲೇ ಕಬ್ಬಿಣದ ವಸ್ತುವಿನಿಂದ ಹೊಟೇಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದರು ಎಂದು ಆರೋಪವಿದೆ.

ಈ ಘಟನೆ ಸಂಬಂಧ ಹೋಟೆಲ್ ಸಿಬ್ಬಂದಿ ಹೆಚ್ ಎಸ್ ಆರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಭೀಮಾ ಜ್ಯೂವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!