ಮಾ. 22ರಂದು ಕರ್ನಾಟಕ ಬಂದ್‌: ಪರೀಕ್ಷೆಗಳು ಪೋಸ್ಟ್‌ಪೋನ್‌? ಏನು ಹೇಳಿದ್ರು ಮಧು ಬಂಗಾರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಾ.22 ರಂದು‌ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈಗಾಗಲೇ ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡೊಲ್ಲ. ಪರೀಕ್ಷೆ ಅದರ ಪಾಡಿಗೆ ನಡೆಯಲಿದೆ. ಮಕ್ಕಳಿಗೆ ಯಾವುದೇ ತೊಂದರೆ ಆಗದೇ ಇರೋ ರೀತಿ ಬಂದ್ ಮಾಡೋರು ಸಹಕಾರ ಕೊಡ್ತಾರೆ ಎಂದಿದ್ದಾರೆ.

ಹೋರಾಟಗಾರರಿಗೆ ಮನವಿ ಮಾಡ್ತೀನಿ. ಹೋರಾಟ ಮಾಡೋಕೆ ನಿಮಗೆ ಹಕ್ಕು ಇದೆ. ಆದರೆ ಪರೀಕ್ಷೆ ಅನ್ನೋದು ಮಕ್ಕಳಿಗೆ ಮುಖ್ಯ. ಮಕ್ಕಳ ಭವಿಷ್ಯ ಪರೀಕ್ಷೆಯಲ್ಲಿದೆ. ಮಕ್ಕಳ ಭವಿಷ್ಯಕ್ಕೆ ಯಾವುದೇ ಅಡಚಣೆ ಮಾಡೋದಿಲ್ಲ ಎಂಬ ವಿಶ್ವಾಸ ಇದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!