ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮಳೆ: ಸುಸ್ತಾಗಿದ್ದ ಇಳೆಗೆ ಹೊಸ ಕಳೆ!

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಉತ್ತಮ‌ ಮಳೆಯಾಗಿದೆ.

ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಕರಾವಳಿಯಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ನಗರದ ತಾಪಮಾನ ಇಳಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ , ಕಡಬ, ಪುತ್ತೂರು ತಾಲೂಕಿನಲ್ಲಿ ತುಂತುರು ಮಳೆಯಾಗಿದೆ.

ಮಧ್ಯಾಹ್ನ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆ 3.30 ರ ವೇಳೆಗೆ ಸುಳ್ಯ ,ಹರಿಹರ , ಅಜ್ಜಾವರ, ಮಂಡೆಕೋಲು, ಅರಂತೋಡು, ಸೋಣಂಗೇರಿ ಹಾಗೂ ಇತರ ಗ್ರಾಮಗಳಲ್ಲಿ ಕೆಲ ಹೊತ್ತು ಗುಡುಗು ಸಹಿತ ತುಂತುರು ಮಳೆಯಾಗಿದೆ.

ಇನ್ನು ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮಳೆಯಾಗಿದ್ದು, ಕಾಸರಗೋಡು ಜಿಲ್ಲೆ ಅಲ್ಲಲ್ಲಿ ತುಂತುರು ಮಳೆಯಾಗುವ ಮೂಲಕ ಬಿಸಿಲ ಬೇಗೆಯಿಂದ ಬೇಸತ್ತು ಹೋಗಿದ್ದ ಜನರಿಗೆ ತಂಪರೆದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!