ಮಂಡ್ಯದಲ್ಲಿ ಭೀಕರ ದುರಂತ: ರೈಲಿಗೆ ತಲೆಕೊಟ್ಟು ಎಎಸ್‌ಐ ಮಗಳು ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಜಿಲ್ಲೆಯ ಬಂದೀಗೌಡ ಬಡಾವಣೆ ಬಳಿ 19 ವರ್ಷದ ವಿದ್ಯಾರ್ಥಿನಿ ಸುಹಾನಾ ರೈಲಿಗೆ ತಲೆಕೊಟ್ಟು ಪ್ರಾಣ ಕಳೆದುಕೊಂಡಿದ್ದಾರೆ.

ಸುಹಾನಾ ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್‌ಐ ಅನ್ಸರ್ ಪಾಷಾ ಅವರ ಮಗಳು . ಮೈಸೂರಲ್ಲಿ ಪ್ರಥಮ ವರ್ಷದ ಬಿ.ಎ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಸುಹಾನಾ ಎಂದಿನಂತೆ ಕಾಲೇಜು ಮುಗಿಸಿ ಮನೆಗೆ ಬಂದಿದ್ದರು.ಮಂಡ್ಯದ ಪೊಲೀಸ್ ಕ್ವಾಟ್ರಸ್ ಮನೆಯಿಂದ ಬೈಕ್ ತೆಗೆದುಕೊಂಡು ಹೋದ ಸುಹಾನಾ ಶವ ಬಂದೀಗೌಡ ಬಡಾವಣೆ ಬಳಿ ಪತ್ತೆಯಾಗಿದೆ.

ಆದರೆ ಏನಾಯ್ತು ಅನ್ನೋದು ಗೊತ್ತಾಗಿಲ್ಲ. ನಿನ್ನೆ ಚಾಮುಂಡಿ ಎಕ್ಸ್ ಪ್ರೆಸ್ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿನಿಯ ದುರಂತದ ಈ ಘಟನೆಗೆ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಂಡ್ಯ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!