ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಸೇರಿದಂತೆ ಅನೇಕ ಗಣ್ಯರ ವಿರುದ್ಧ ಅವಹೇನಕಾರಿಯಾಗಿ ಹಾಸ್ಯ ಮಾಡಿ ಸಂಕಷ್ಟಕ್ಕೀಡಾಗಿರುವ ಕಾಮಿಡಿಯನ್ ಕುನಾಲ್ ಕಮ್ರಾ ಈಗ ನಿರೀಕ್ಷಣ ಜಾಮೀನು ಕೋರಿ ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ದ್ರೋಹಿ ಎಂದು ಕರೆದಿದ್ದರು. ಇದರಿಂದ ಆಕ್ರೋಶಗೊಂಡ ಶಿವಸೇನೆ ಕಾರ್ಯಕರ್ತರು ಕುನಾಲ್ ಕಮ್ರಾ ಕಾರ್ಯಕ್ರಮ ನಡೆಸಿದ್ದ ಸ್ಟುಡಿಯೋವನ್ನು, ಸಭಾಂಗಣವನ್ನೇ ದಾಂಧಲೆ ನಡೆಸಿ ಧ್ವಂಸಗೊಳಿಸಿದ್ದರು.
ನಂತರ ಮುಂಬೈ ಪೊಲೀಸರು ಕಮ್ರಾ ಅವರಿಗೆ ಎರಡು ಸಮನ್ಸ್ ಕಳುಹಿಸಿ ಮಾರ್ಚ್ 31 ರೊಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕುನಾಲ್ ಕಮ್ರಾ ಈಗ ಮದ್ರಾಸ್ ಹೈಕೋರ್ಟ್ನಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಕಮ್ರಾ ತಮಿಳುನಾಡಿನ ವಿಲ್ಲುಪುರಂನಲ್ಲಿ ಶಾಶ್ವತವಾಗಿ ವಾಸಿಸುತ್ತಿರುವುದರಿಂದ ಚೆನ್ನೈ ಹೈಕೋರ್ಟ್ನಲ್ಲಿ ಕುನಾಲ್ ಕಮ್ರಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಯಲ್ಲಿ ತನ್ನ ಸ್ವಂತ ಊರು ವಿಲ್ಲುಪುರಂ ಎಂದು, ತಾನು ಮುಂಬೈಗೆ ಹೋದರೆ ಪೊಲೀಸರು ನನ್ನನ್ನು ಬಂಧಿಸುತ್ತಾರೆ, ಶಿವಸೇನೆ ಕಾರ್ಯಕರ್ತರಿಂದ ತನ್ನ ಜೀವಕ್ಕೆ ಅಪಾಯವಿದೆ ಹಾಗಾಗಿ ನನಗೆ ಇಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ.