ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಪಕ್ಷಗಳು ಸಿಡಿದೆದ್ದಿದ್ದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಏಪ್ರಿಲ್ 2ರಂದು ಬೆಳಗ್ಗೆ 11 ರಿಂದ ಏಪ್ರಿಲ್ 3ರಂದು ಬೆಳಗ್ಗೆ 11 ಗಂಟೆಯವರೆಗೆ 24 ಗಂಟೆ ಕಾಲ ನಿರಂತರ ಧರಣಿ ನಡೆಸುವ ಮೂಲಕ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಕುರಿತು ಮಾಹಿತಿ ನೀಡಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರಿಗೆ ತೀವ್ರು ಹೊರೆಯಾಗುತ್ತಿದೆ. ಹೀಗಾಗಿ ಬೆಲೆ ಏರಿಕೆ ವಿರುದ್ಧ ಶಾಸಕರು, ಜಿಲ್ಲಾ ಅಧ್ಯಕ್ಷರು, ಪರಾಜಿತ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.