ಯುಗಾದಿ ಮರುದಿನವೇ ಶುರುವಾಯ್ತು ಮಳೆರಾಯನ ಅಬ್ಬರ:ಈ ಜಿಲ್ಲೆಗಳಿಗಿದೆ ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಸಿಲ ಬೇಗೆಗೆ ಕಂಗಾಲಾಗಿರುವ ಜನ ಇದೀಗ ಮಳೆ ಹನಿಯಿಂದಾಗಿ ಸ್ವಲ್ಪ ಮಟ್ಟಿಗೆ ತಂಪಾಗಿದ್ದಾರೆ. ಇದೀಗ ಹವಾಮಾನ ಇಲಾಖೆ ಮತ್ತೆ ರಾಜ್ಯಕ್ಕೆ ಮಳೆ ಅಲರ್ಟ್‌ ಘೋಷಿಸಿದೆ.

ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಜೋರು ಮಳೆಯಾಗುವ ಸೂಚನೆ ನೀಡಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಏಪ್ರಿಲ್‌ 3 ರಿಂದ ಮತ್ತೆ ರಾಜ್ಯದಲ್ಲಿ ವರುಣಾರ್ಭಟ ಶುರುವಾಗಲಿದೆ.

ರಾಜ್ಯದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಶಿವಮೊಗ್ಗ, ರಾಮನಗರ,ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!