ನಾಳೆ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ: ಕಾಂಗ್ರೆಸ್ ನಿಂದ ಸಂಸದರಿಗೆ ವಿಪ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ನಾಳೆ ಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಲು ಮುಂದಾಗಿದ್ದು, ಹೀಗಾಗಿ ಕಾಂಗ್ರೆಸ್ ಇಂದು ಲೋಕಸಭೆಯಲ್ಲಿನ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿಗೊಳಿಸಿದೆ.

ಮುಂದಿನ 3 ದಿನಗಳವರೆಗೆ ಕಾಂಗ್ರೆಸ್ ಸಂಸದರು ಸದನದಲ್ಲಿ ಇರಲೇಬೇಕೆಂದು ಸೂಚಿಸಿದೆ.

ವಕ್ಫ್ ತಿದ್ದುಪಡಿ ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಎನ್​ಡಿಎ ಸರ್ಕಾರ ಸ್ಪಷ್ಟಪಡಿಸಿದ ನಂತರ ಕಾಂಗ್ರೆಸ್ ಪಕ್ಷವು ವಿಪ್ ಜಾರಿಗೊಳಿಸಿದೆ. ಈ ಮೂಲಕ ತ್ರೀವ ವಿರೋಧಕ್ಕೆ ಸಿದ್ಧತೆ ನಡೆಸಿದೆ.

ಪ್ರಸ್ತಾವಿತ ಕಾನೂನನ್ನು ಅಸಂವಿಧಾನಿಕ ಎಂದು ಖಂಡಿಸುವಲ್ಲಿ ವಿರೋಧ ಪಕ್ಷದ ಒಗ್ಗಟ್ಟಿನ ನಡುವೆ ಇದು ಪ್ರಮುಖ ಘರ್ಷಣೆಗೆ ವೇದಿಕೆಯನ್ನು ಸಿದ್ಧಪಡಿಸುತ್ತದೆ. ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯ ಎಲ್ಲಾ ಪ್ರಮುಖ ಪಕ್ಷಗಳ ನಾಯಕರನ್ನು ಒಳಗೊಂಡ ಲೋಕಸಭೆಯ ವ್ಯವಹಾರ ಸಲಹಾ ಸಮಿತಿ (ಬಿಎಸಿ) 8 ಗಂಟೆಗಳ ಚರ್ಚೆಗೆ ಒಪ್ಪಿಗೆ ನೀಡಿದೆ ಎಂದು ಅಲ್ಪಸಂಖ್ಯಾತರು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್ ಮತ್ತು ಇತರ ಹಲವಾರು ವಿರೋಧ ಪಕ್ಷದ ಇಂಡಿಯಾ ಬ್ಲಾಕ್ ಸದಸ್ಯರು ಬಿಎಸಿ ಸಭೆಯಿಂದ ಹೊರನಡೆದಿದ್ದರು. ಸರ್ಕಾರವು ತಮ್ಮ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಸಭೆಯಿಂದ ಹೊರನಡೆದಿದ್ದರು.

ಆದರೆ, ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸಂಖ್ಯಾಬಲವು ಹೆಚ್ಚು ಅನುಕೂಲಕರವಾಗಿರುವುದರಿಂದ ರಾಜಕೀಯ ಬಿಸಿ ಮತ್ತು ಚರ್ಚೆಯ ಅವಧಿಯು ಅಂತಿಮ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರುವ ಸಾಧ್ಯತೆಯಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!