ತೆಪ್ಪ ಮಗುಚಿ ಬಿದ್ದು ಇಬ್ಬರು ಯುವಕರು ಸಾವು, ನಾಲ್ವರು ಪ್ರಾಣಾಪಾಯದಿಂದ ಪಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೆರೆಯಲ್ಲಿ ತೆಪ್ಪ ಮಗುಚಿ ಬಿದ್ದು ನೀರಲ್ಲಿ ಮುಳುಗಿ ಆರು ಯುವಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ವಿಜಯಪುರ ತಾಲೂಕಿ ಕುಮಟಗಿ ಕೆರೆಯಲ್ಲಿ ನಿನ್ನೆ  ನಡೆದಿದೆ.

ಸೋಯಲ್ ಹತ್ತರಕಿಹಾಳ(25) ಮತ್ತು ನಿಸಾರ್ ಜಮಾದಾರ್(19) ಮೃತರು. ಅಸ್ವಸ್ಥಗೊಂಡಿದ್ದ ನಿಸಾರ್ ಜಮಾದಾರ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಕೊನೆಯುಸಿರೆಳೆದಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಮಟಗಿ ಕೆರೆಯಲ್ಲಿ ಆರು ಯುವಕರು ತೆಪ್ಪ ತೆಗದುಕೊಂಡು ಹೋಗಿದ್ದರು. ಮೋಹಸಿನ್ ಮುಲ್ಲಾ, ತೌಫೀಕ್, ಮೋಹಸೀನ್ ಹಾಗೂ ರಿಯಾಜ್ ಅಪಾಯದಿಂದ ಪಾರಾದ ಯುವಕರು. ಸದ್ಯ ಮೊಹಮ್ಮದ್ ಕೈಪ್ ಹಾಗೂ ಸೋಯಲ್ ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ತರಿಗೆ ಪೊಲೀಸರು ಹಸ್ತಾಂತರ ಮಾಡಲಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು, ಸ್ಥಳದಲ್ಲಿ ಮೃತ ಯುವಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!