ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಭವಾನಿ ರೇವಣ್ಣಗೆ ಇದೀಗ ಹೈಕೋರ್ಟ್ ಷರತ್ತು ಸಡಿಲಿಸಿದ್ದು, ಹಾಸನ ಮತ್ತು ಮೈಸೂರಿಗೆ ತೆರಳಲು ಅನುಮತಿ ನೀಡಿದೆ.
ನಿರೀಕ್ಷಣಾ ಜಾಮೀನು ವೇಳೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಇದೀಗ ಶರತ್ತು ಸಡಲಿಸಿದೆ. ಅಲ್ಲದೇ ಸಂತ್ರಸ್ತ ಮತ್ತು ಸಾಕ್ಷಿಗಳ ಮನೆಯ 500 ಮೀಟರ್ ಸುತ್ತಳತೆ ಪ್ರವೇಶಿಸುವಂತಿಲ್ಲ ಎಂದು ಹೊಸ ಷರತ್ತನ್ನು ವಿಧಿಸಿದೆ.