ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಂಭವಿಸಿದ ಬಾಣಂತಿಯರ ಸರಣಿ ಸಾವಿನ ಕುರಿತು ಡೆತ್ ಆಡಿಟ್ ವರದಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಟೆಕ್ನಿಕಲ್ ಕಮಿಟಿ ವರದಿಯ ಶಿಫಾರಸು ಸರ್ಕಾರ ಪಡೆದಿದೆ. ಅಗತ್ಯ ಔಷಧ ಸಲಕರಣೆ, ವೈದ್ಯರು ಜವಾಬ್ದಾರಿ ನಿರ್ವಹಿಸಿದ್ದರೇ, ಶೇ 70 ರಷ್ಟು ಬಾಣಂತಿಯರ ಸಾವುಗಳನ್ನು ನಾವು ತಡೆಯಬಹುದಿತ್ತು. ರಿಂಗರ್ ಲ್ಯಾಕ್ಟೇಟ್ ಸಮಸ್ಯೆಯಿಂದ 18 ಮಂದಿಯ ಬಾಣಂತಿಯರ ಸಾವಾಗಿದೆ. ಡಿಸೆಂಬರ್ನಿಂದ ಇದನ್ನು ಸರಿಪಡಿಸಲು ತಯಾರಿ ಮಾಡಿದ್ದೇವೆ ಫ್ರೆಷ್ ಫ್ರೋಜನ್ ಪ್ಲಾಸ್ಮಾ ಇದ್ದಿದ್ರೆ ಸಾವಿನ ಸಂಖ್ಯೆ ತಡೆಯಬಹುದಿತ್ತು ಎಂದು ಹೇಳಿದರು.
ಬಳ್ಳಾರಿಯಲ್ಲಿ 5 ಸಾವು ಆಗಿರುವಂತೆ 13 ಕಡೆಗಳಲ್ಲೂ ಹೀಗೆ ಆಗಿದೆ ಎಂಬ ಅನುಮಾನ ಇದೆ. 10 ಮಂದಿ ವೈದ್ಯರಿಗೆ ನಿರ್ಲಕ್ಷ್ಯದ ಕಾರಣಕ್ಕೆ ನೊಟೀಸ್ ನೀಡಿದ್ದೇವೆ ಎಂದು ತಿಳಸಿದರು.