ಹನುಮ ಧ್ವಜ ಕಿತ್ತು ಹಾಕಿದಂತೆ ಹಣೆಯ ಮೇಲಿನ ಕುಂಕುಮವನ್ನೂ ಅಳಿಸಬಹುದು: ಸಿ.ಟಿ.ರವಿ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಲೂಟಿ ಮಾಡುವಲ್ಲಿ ಚಂಬಲ್‌ ಕಣಿವೆ ದರೋಡೆಕೋರರನ್ನೂ ಮೀರಿಸಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.

‘ಜನಾಕ್ರೋಶ ಯಾತ್ರೆ’ಯಲ್ಲಿ ಮಾತನಾಡಿ, ಹಾಲು, ವಿದ್ಯುತ್‌, ಪೆಟ್ರೋಲ್‌ ಸೇರಿದಂತೆ 50ಕ್ಕೂ ಹೆಚ್ಚಿನ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಜೊತೆಗೆ ತಮಿಳುನಾಡಿಗೆ ಅಗತ್ಯಕ್ಕಿಂತ ಹೆಚ್ಚು ನೀರು ಬಿಟ್ಟ ಕಾಂಗ್ರೆಸ್‌ ಸರ್ಕಾರದವರು ರಾಜ್ಯಕ್ಕೆ ಮಾರಿಯಾಗಿ, ತಮಿಳುನಾಡಿಗೆ ಉಪಕಾರಿಯಾಗಿದ್ದಾರೆ ಎಂದರು.

ಮೋದಿ ಇಲ್ಲದಿದ್ದರೆ ದೇಶ ಉಳಿಯುತ್ತಿತ್ತಾ? ಪುಂಡರು ಹನುಮ ಧ್ವಜ ಕಿತ್ತು ಹಾಕಿದಂತೆ ಹಣೆಯ ಮೇಲಿನ ಕುಂಕುಮವನ್ನೂ ಅಳಿಸಿ ಹಾಕುತ್ತಿದ್ದರು. ನಾಗಮಂಗಲ ಮತ್ತು ಉದಯಗಿರಿ ಗಲಭೆಗಳಲ್ಲಿ ಕಲ್ಲು ಎಸೆದವರನ್ನು ಹೆಡೆಮುರಿ ಕಟ್ಟದ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಕಲ್ಲು ಹೊಡೆದವರ ಮೇಲೆ ಬುಲ್ಡೋಜರ್‌ ಹತ್ತಿಸಬೇಕಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!