ಕರ್ನಾಟಕದಲ್ಲಿ ಕಾಂಗ್ರೆಸ್ ಇವಿಎಂ ಮೋಸದಿಂದ ಗೆದ್ದಿದೆಯೇ?: ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ ಸಿ.ಟಿ.ರವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇವಿಎಂ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿ, ‘ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ, ಇವಿಎಂ ಮಹಾ ಮೋಸ, ಮಹಾ ಮೋಸ ಎಂದು ವ್ಯರ್ಥಾಲಾಪ ಮಾಡುತ್ತಿರುವ ನೀವು ಹೇಳಲು ಹೊರಟಿರುವುದು ಏನು?’ ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಮಾತು ಕೇಳಿದಾಗ ‘ಯದ್ಭಾವಂ ತದ್ಭವತಿ’ ಎಂಬ ನಾಣ್ನುಡಿ ನೆನಪಾಗುತ್ತದೆ. ಅಂದ ಹಾಗೆ, ನಿಮ್ಮ ಅಳಿಯ ಶ್ರೀ ರಾಧಾಕೃಷ್ಣ, ಕಾಂಗ್ರೆಸ್ಸಿನ ನವ ಅಧಿನಾಯಕಿ ಪ್ರಿಯಾಂಕಾ ವಾದ್ರಾ, ನಿಮ್ಮ ಅಧಿನಾಯಕ ರಾಹುಲ್ ಗಾಂಧಿ ಇವರೆಲ್ಲರೂ ಇವಿಎಂ ಮೋಸದಿಂದಲೇ ಗೆದ್ದಿದ್ದಾರೆ ಎಂದೇ? ಎಂದು ಕೇಳಿದ್ದಾರೆ.

ತಮಿಳುನಾಡುನಲ್ಲಿ ಡಿಎಂಕೆ, ಕೇರಳದಲ್ಲಿ ಕಮ್ಯುನಿಸ್ಟರು, ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್, ಕರ್ನಾಟಕದಲ್ಲಿ ಕಾಂಗ್ರೆಸ್ ಇವಿಎಂ ಕಾರಣಕ್ಕೆ ಗೆದ್ದಿದ್ದಾರೆ. ‘ಇಂಡಿ’ ಒಕ್ಕೂಟ ಇಂಥಹ ಮೋಸ ಮಾಡಿಯೇ ಚುನಾವಣೆ ಗೆದ್ದಿದ್ದಾರೆ ಎಂಬುದು ನಿಮ್ಮ ಮಾತಿನ ಅರ್ಥವೇ? ಎಂದು ಸಿ.ಟಿ.ರವಿ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!