January 31, 2026
Saturday, January 31, 2026
spot_img

ಸಿಜೆ ರಾಯ್ ಆತ್ಮ*ಹತ್ಯೆ ಕೇಸ್: ಎಸ್ಐಟಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿಯಿಂದ ತನಿಖೆ ಆಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತಣಿಕೆಗಾಗಿ ಎಸ್ಐಟಿ ರಚನೆ ಮಾಡಲಾಗಿದೆ . ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಸಹ ಇರುತ್ತಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅವರಿಗೆ ಏನಾದರೂ ಸಮಸ್ಯೆ ಇತ್ತ?ಎನ್ನುವುದರ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !