BREAKING | ಬಂಡೀಪುರ ಕಣಿವೆಯಲ್ಲಿ ಫೈರಿಂಗ್‌: ಲಷ್ಕರ್​ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್ ಉಡೀಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆಯಾಗಿದ್ದಾನೆ.

ಉಗ್ರರ ಹೆಡೆಮುರಿಕಟ್ಟಲು ಭಾರತೀಯ ಸೇನೆ ಆಪರೇಷನ್‌ ಟಿಕ್ಕಾ ಆರಂಭ ಮಾಡಿದ್ದು, ಬಂಡೀಪುರದಲ್ಲಿ ಸೈನ್ಯ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಅಲ್ತಾಫ್‌ ಮೃತಪಟ್ಟಿದ್ದಾನೆ. ಆಪರೇಷನ್‌ ಇನ್ನೂ ಜಾರಿಯಲ್ಲಿದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ ಎಂದು ನಂಬಲಾದ ಎಲ್‌ಇಟಿ ಭಯೋತ್ಪಾದಕರನ್ನು ಪತ್ತೆಹಚ್ಚುವ ನಿರಂತರ ಪ್ರಯತ್ನಗಳ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!