ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿನಯ್ ಕುಲಕರ್ಣಿ ಮನೆ ಮೇಲೆ ಇಡಿ ದಾಳಿ ದ್ವೇಷದ ರಾಜಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಇಡಿ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಇಡಿಯವರು ಕೇಂದ್ರ ಸರ್ಕಾರದ ಆದೇಶದಂತೆ ನಡೆದುಕೊಂಡು ಯಾವಾಗಲೂ ದ್ವೇಷದ ರಾಜಕೀಯ ಮಾಡುತ್ತಾರೆ.
ವಿನಯ್ ಕುಲಕರ್ಣಿಯವರ ಮನೆ ಮೇಲೆ ಇದ್ದಕ್ಕಿದ್ದಂತೆ ದಾಳಿ ಮಾಡುವುದೆಂದರೆ ಇದರ ಹಿಂದೆ ಯಾರದ್ದಾದರೂ ಕೈವಾಡ ಇರಬೇಕಲ್ಲವೇ, ಇದು ದ್ವೇಷದ ರಾಜಕಾರಣವಲ್ಲದೆ ಮತ್ತಿನ್ನೇನು, ಬಿಜೆಪಿ ನಾಯಕರ ಮನೆ ಮೇಲೆ ಏಕೆ ದಾಳಿಯಾಗುತ್ತಿಲ್ಲ, ಅವರೇನು ಶುದ್ಧಹಸ್ತರೇ ಎಂದು ಕೇಳಿದರು.