ಬಾರ್‌ನಲ್ಲಿ ನಿಧಾನಕ್ಕೆ ಮಾತನಾಡಿ ಅಂದಿದ್ದೆ ಓರ್ವ ವ್ಯಕ್ತಿಯ ಹತ್ಯೆಗೆ ಕಾರಣವಾಯ್ತು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾರ್‌ನಲ್ಲಿ ನಿಧಾನಕ್ಕೆ ಮಾತನಾಡಿ ಎಂದು ಹೇಳಿದಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಗಯ್ಯನದೊಡ್ಡಿಯಲ್ಲಿ ನಡೆದಿದೆ.

ಸುರೇಶ್ ಕೊಲೆಯಾದ ವ್ಯಕ್ತಿ. ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್, ಶುಕ್ರವಾರ ರಾತ್ರಿ ಮದ್ಯ ಸೇವಿಸಲು ಸ್ನೇಹಿತರ ಜೊತೆ ಬಾರ್‌ಗೆ ತೆರಳಿದ್ದ. ಅದೇ ಬಾರ್‌ನಲ್ಲಿ ಕಾಂತರಾಜು ಹಾಗೂ ಆತನ ಗ್ಯಾಂಗ್ ಜೋರಾಗಿ ಮಾತನಾಡುತ್ತಿದ್ದರು. ಆಗ ಸುರೇಶ್, ನಿಧಾನಕ್ಕೆ ಮಾತನಾಡಿ ಎಂದು ಹೇಳಿದ್ದ. ಈ ಮಾತಿಗೆ ಕೋಪಗೊಂಡ ಕಾಂತರಾಜು ನೀನು ಯಾರು ಕೇಳೋಕೆ ಎಂದು ಹೇಳಿದ್ದಾನೆ.

ಇದಾದ ಬಳಿಕ ಸುರೇಶ್ ಮನೆಗೆ ತೆರಳಿದ್ದ, ಕಾಂತರಾಜು ಹಾಗೂ ಆತನ ಗ್ಯಾಂಗ್ ಸುರೇಶ್‌ನನ್ನು ಹಿಂಬಾಲಿಸಿಕೊಂಡು ಬಂದಿದ್ದು, ಆತನ ಮನೆಗೆ ನುಗ್ಗಿ ಪತ್ನಿ ಮುಂದೆಯೇ ಹೊಟ್ಟೆ ಮತ್ತು ಎದೆ ಭಾಗಕ್ಕೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾರೆ.

ತಕ್ಷಣ ಸುರೇಶನನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿದರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!