ಕೊಡಗಿನಲ್ಲಿ ಪಾಕ್ ಪ್ರಜೆಗಳ ವಾಸ್ತವ್ಯವಿಲ್ಲ: ಎಸ್ಪಿ ರಾಮರಾಜನ್

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಪಾಕಿಸ್ತಾನಿ ಪಾಸ್‌ಪೋರ್ಟ್ ಹೊಂದಿರುವ ಯಾವುದೇ ವ್ಯಕ್ತಿಗಳು ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸ್ಪಷ್ಟಪಡಿಸಿದ್ದಾರೆ.

ಜಮ್ಮುಕಾಶ್ಮೀರದ ಪಹಲ್ಗಾಂನಲ್ಲಿ ಭಯೋತ್ಪಾದಕರಿಂದ ನಡೆದ ಪ್ರವಾಸಿಗರ ಮಾರಣಹೋಮದ‌ ಬಳಿಕ ಕೇಂದ್ರ ಸರಕಾರ 48ಗಂಟೆಗಳಲ್ಲಿ ಪಾಕ್ ಪ್ರಜೆಗಳನ್ನು ಭಾರತದಿಂದ ಹೊರಹೋಗುವಂತೆ‌ ಸೂಚಿಸಿದೆ.

ಅದರನ್ವಯ ಕೊಡಗು ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ಇದ್ದಾರೆಯೇ ಎಂಬ‌ ಪ್ರಕಾರ ಪ್ರಶ್ನೆಗೆ ರಾಮರಾಜನ್ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಅಸ್ಸಾಂ‌ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾ ನುಸುಳುಕೋರರು ವಾಸ್ತವ್ಯ ಹೂಡಿರುವ ಶಂಕೆ‌ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ‌ಅಸ್ಸಾಂ‌ ಕಾರ್ಮಿಕರು ಕೆಲಸ ಮಾಡುತ್ತಿರುವ ಕಾಫಿ ತೋಟಗಳ ಮಾಲಕರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಕಾರ್ಮಿಕರ‌ ಮಾಹಿತಿ ನೀಡುವಂತೆ ಹಲವು ಬಾರಿ ಸೂಚಿಸಲಾಗಿದೆ. ಆದರೆ ಅನೇಕರು ಇನ್ನೂ ಮಾಹಿತಿ ನೀಡುತ್ತಿಲ್ಲ ಎಂದು ರಾಮರಾಜನ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!