ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀರು ಹರಿಯುವುದನ್ನು ನಿಲ್ಲಿಸಿದರೆ ನಾವು ಭಾರತದಲ್ಲಿ ರಕ್ತದ ನದಿಯನ್ನು ಹರಿಸುತ್ತೇವೆ ಎಂದಿದ್ದ ಪಾಕಿಸ್ತಾನದಲ್ಲಿ ಇದೀಗ ದಿಢೀರ್ ಪ್ರವಾಹ ಉಂಟಾಗಿದೆ.
ಉರಿ ಜಲಾಶಯದಿಂದ ಝೀಲಂ ನದಿಗೆ ಭಾರೀ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಿದ್ದರಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಮುಜಾಫರಾಬಾದ್ನಲ್ಲಿ ಭಾರೀ ಪ್ರವಾಹ ಉಂಟಾಗಿದೆ. ಯಾವುದೇ ಪೂರ್ವಸೂಚನೆ ನೀಡದೇ ಭಾರತ ಏಕಾಏಕಿ ನದಿಗೆ ನೀರನ್ನು ಹರಿಸಿದೆ ಎಂದು ಪಾಕ್ ಮಾಧ್ಯಮಗಳು ಭಾರತದ ವಿರುದ್ಧ ಗುಡುಗಿದ.
ಝೀಲಂ ನದಿಯ ದಡದಲ್ಲಿರುವ ಮುಜಫರಾಬಾದ್ನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಹಟ್ಟಿಯನ್ ಬಾಲಾದಲ್ಲಿ ಸ್ಥಳೀಯ ಆಡಳಿತವು ನೆರೆಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ನದಿಗೆ ಇಳಿಯದಂತೆ ಸ್ಥಳೀಯರಿಗೆ ಎಚ್ಚರಿಕೆ ನೀಡಿದೆ.