‘ಸರ್ಜಿಕಲ್ ಸ್ಟ್ರೈಕ್’ ಪ್ರಶ್ನಿಸಿದ ಚರಣ್‌ಜಿತ್ ಸಿಂಗ್ ಚನ್ನಿ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

2019 ರ “ಸರ್ಜಿಕಲ್ ಸ್ಟ್ರೈಕ್” ಗಳನ್ನು ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಪ್ರಶ್ನಿಸಿದ ನಂತರ ಕಾಂಗ್ರೆಸ್ ಪಕ್ಷವು ಸಶಸ್ತ್ರ ಪಡೆಗಳ ನೈತಿಕ ಸ್ಥೈರ್ಯಕ್ಕೆ ಹಾನಿ ಉಂಟುಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಆರೋಪಿಸಿದ್ದಾರೆ.

“ಕಾಂಗ್ರೆಸ್ ಪಾಕಿಸ್ತಾನ ಪ್ರಾಸ್ಟ್ ಪಾರ್ಟಿ (ಪಿಪಿಪಿ) ಆಗಿ ಮಾರ್ಪಟ್ಟಿದೆ. ಪಾಕಿಸ್ತಾನದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಮತ್ತೆ, ಅವರು ಸಶಸ್ತ್ರ ಪಡೆಗಳ ನೈತಿಕತೆಯನ್ನು ಕುಗ್ಗಿಸಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೂ ಮೊದಲು, ರಾಹುಲ್ ಗಾಂಧಿ ಕೂಡ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆಗಳನ್ನು ಕೋರಿದ್ದಾರೆ. ರಾಬರ್ಟ್ ವಾದ್ರಾ ಮತ್ತು ಇತರ ಕಾಂಗ್ರೆಸ್ ಪಕ್ಷದ ನಾಯಕರು ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ನೀಡಿದ್ದಾರೆ ಮತ್ತು ಹಿಂದುತ್ವವನ್ನು ದೂಷಿಸಿದ್ದಾರೆ. ಅವರು ಯಾವಾಗಲೂ ಪಾಕಿಸ್ತಾನದೊಂದಿಗೆ ತಮ್ಮ ಧ್ವನಿ ಎತ್ತುತ್ತಾರೆ”ಎಂದು ಪೂನವಾಲಾ ವೀಡಿಯೊ ಸಂದೇಶದಲ್ಲಿ ಗುಡುಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!