ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಂಕಿತ ಭಯೋತ್ಪಾದಕರು ಚೆನ್ನೈ ಮಲಕ ಶ್ರೀಲಂಕಾಗೆ ಪ್ರಯಾಣಿಸುತ್ತಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಶ್ರೀಮಳಕಾ ಏರ್ಲೈನ್ಸ್ಗೆ ಸೇರಿದ ವಿಮಾನವನ್ನು ಬಂಡಾರನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಭದ್ರತಾ ಪಡೆ ಸುತ್ತುವರಿದು ತಪಾಸಣೆಗೆ ಒಳಪಡಿಸಿದೆ.
ಬೆಳಿಗ್ಗೆ ೧೧.೫೯ಕ್ಕೆ ಚೆನ್ನೈನಿಂದ ಕೊಲಂಬೊಗೆ ಬಂದಿಳಿದ ಈ ವಿಮಾನದಲ್ಲಿ ಪಹಲ್ಗಾಮ್ ದಾಳಿಗೆ ಸಂಬಂಧಿಸಿ ಉಗ್ರರು ಪರಾರಿಯಾಗುತ್ತಿದ್ದಾರೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಈ ಶೋಧ ನಡೆದಿದೆ.
ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಸಂಭಾವ್ಯ ಶಂಕಿತರನ್ನು ಭಾರತೀಯ ಗುಪ್ತಚರ ಇಲಾಖೆ ಈಗಾಗಲೇ ಗುರುತಿಸಿದ್ದು, ಚೆನ್ನೈನಿಂದ ಬಂದ ಈ ವಿಮಾನದಲ್ಲಿ ೬ ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಭಾರತದಿಂದ ಬಂದ ಎಚ್ಚರಿಕೆ ಬಂದ ನಂತರ ಶೋಧ ನಡೆಸಲಾಗಿದೆ ಎಂದು ಶ್ರೀಲಂಕಾ ಭದ್ರತಾಪಡೆ ಅಧಿಕಾರಿಗಳು ತಿಳಿಸಿದ್ದಾರೆ.