ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಪಾಕ್ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳ ಅಂತರದಲ್ಲಿ ಪಾಪಿ ಪಾಕಿಸ್ತಾನ ಜಮ್ಮು ಕಾಶ್ಮೀರದ ಗಡಿ ಭಾಗದಲ್ಲಿ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿದೆ.
ಶ್ರೀ ನಗರದಲ್ಲಿ 4-5 ಬಾರಿ ಸ್ಪೋಟ ಕೇಳಿಸಿದ್ದು, ಶ್ರೀನಗರದಲ್ಲಿ ಬ್ಲಾಕ್ ಔಟ್ ಮಾಡಲಾಗಿದೆ. ಶ್ರೀನಗರದತ್ತ 50ಕ್ಕೂ ಹೆಚ್ಚು ಪಾಕಿಸ್ತಾನ್ ಡ್ರೋನ್ ಗಳು ನುಗ್ಗಿ ಬಂದಿವೆ. ಸೇನಾ ನೆಲೆಗಳನ್ನೇ ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ನಡೆಸುತ್ತಿದೆ. ಭಾರತೀಯ ಸೇನೆ ಹೊಡೆದುರುಳಿಸಿದೆ.
ಕಾಶ್ಮೀರ, ರಾಜಸ್ಥಾನ್, ಗುಜರಾತ್ , ಪಂಜಾಬ್ ಗಳನ್ನು ಪಾಕಿಸ್ತಾನ ಟಾರ್ಗೆಟ್ ಮಾಡಿದೆ. ಭಾರತ ತಕ್ಕ ಪ್ರತ್ಯುತ್ತರ ನೀಡುತ್ತಿದೆ.