ಪಾಕ್ ವಿರುದ್ಧ ಹೋರಾಡಲು ಯಾವುದೇ ಪರಿಸ್ಥಿತಿಯಲ್ಲೂ ಸರ್ವಸನ್ನದ್ಧ: ಭಾರತೀಯ ಸೇನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಸೇನಾ ನೆಲೆಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ. ಯಾವುದೇ ಪರಿಸ್ಥಿತಿ ಎದುರಿಸಲು ಸೇನೆ ಸನ್ನದ್ಧವಾಗಿದೆ ಎಂದು ಡಿಜಿಎಂಒ ರಾಜೀವ್ ಘಾಯ್ ತಿಳಿಸಿದ್ದಾರೆ.

ಇಂದು ಮೂರು ಸೇನೆಯ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಬಲಿಷ್ಠ ವಾಯು ರಕ್ಷಣಾ ಗ್ರಿಡ್ ಮುಂದೆ ಅವರು ವಿಫಲರಾದರು ಎಂದು ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಹೇಳಿದರು. ನಮ್ಮ ವಾಯು ರಕ್ಷಣೆ ಎಷ್ಟು ಬಲಿಷ್ಠವಾಗಿತ್ತೆಂದರೆ ಪಾಕಿಸ್ತಾನಕ್ಕೆ ಯಾವುದೇ ಅವಕಾಶವಿರಲಿಲ್ಲ ಎಂದರು.

ನಮ್ಮ ಎಲ್ಲಾ ವಾಯುನೆಲೆಗಳು ಉತ್ತಮ ಸ್ಥಿತಿಯಲ್ಲಿವೆ. ನಾನು ನಮ್ಮ ಗಡಿ ಭದ್ರತಾ ಪಡೆಯನ್ನೂ ಹೊಗಳಲು ಬಯಸುತ್ತೇನೆ. ಅವರು ನಮ್ಮನ್ನು ತುಂಬಾ ಧೈರ್ಯದಿಂದ ಬೆಂಬಲಿಸಿದರು. ಅವರ ಪ್ರತಿ ಎಚ್ಚರಿಕೆ ವ್ಯವಸ್ಥೆಗಳು ನಮ್ಮ ವಾಯು ರಕ್ಷಣಾ ವ್ಯವಸ್ಥೆಯ ಭಾಗವಾಗಿದ್ದವು, ಇದು ಪಾಕಿಸ್ತಾನದ ದುಷ್ಟ ಉದ್ದೇಶಗಳನ್ನು ನಾಶಮಾಡಿತು ಎಂದರು.

ಏರ್ ಮಾರ್ಷಲ್ ಎ.ಕೆ. ಭಾರ್ತಿ ಮಾತನಾಡಿ, ನಮ್ಮ ಹಳೆಯ ಆಯುಧಗಳು ಯುದ್ಧದಲ್ಲಿ ಅದ್ಭುತಗಳನ್ನು ಮಾಡಿವೆ. ಪಾಕಿಸ್ತಾನದ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದವು. ಆಕಾಶ್ ವ್ಯವಸ್ಥೆಯನ್ನು ಬಳಸಿಕೊಂಡು, ಪಾಕಿಸ್ತಾನ ಕಳುಹಿಸಿದ್ದ ಡ್ರೋನ್‌ಗಳನ್ನು ನಾವು ನಾಶಪಡಿಸಿದ್ದೇವೆ. ಪಾಕಿಸ್ತಾನದ ಪಿಎಲ್-15 ಕ್ಷಿಪಣಿ ಮತ್ತು ಚೀನಾದ ಡ್ರೋನ್‌ಗಳನ್ನು ನಾವು ಯಶಸ್ವಿಯಾಗಿ ಗುರಿಯಾಗಿಸಿಕೊಂಡಿದ್ದೇವೆ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!