ಭಾರತ- ಪಾಕಿಸ್ತಾನ ಕದನ ವಿರಾಮ: ನಾಳೆಯಿಂದ ಶ್ರೀನಗರ ಏರ್ಪೋರ್ಟ್ ನಿಂದ ವಿಮಾನಗಳ ಹಾರಾಟ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಭಾರತ- ಪಾಕಿಸ್ತಾನ ನಡುವಣ ಕದನ ವಿರಾಮ ಒಪ್ಪಂದದ ಬಳಿಕ ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಾಳೆಯಿಂದ ವಿಮಾನಗಳ ಹಾರಾಟ ಪುನರ್ ಆರಂಭವಾಗಲಿದೆ.

ಸಾಮಾನ್ಯ ವಿಮಾನಗಳ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ವಿಮಾನ ನಿಲ್ದಾಣ ಮುಚ್ಚಿದ್ದರಿಂದ ಹಜ್ ವಿಮಾನಗಳ ಹಾರಾಟವನ್ನು ಕೂಡಾ ಸ್ಥಗಿತಗೊಳಿಸಲಾಗಿತ್ತು. ಇದೀಗ ದೇಶದ 32 ವಿಮಾನ ನಿಲ್ದಾಣಗಳಲ್ಲಿ ವಿಮಾನ ಹಾರಾಟ ಪುನರ್ ಆರಂಭಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಕಟಣೆ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ನಾಳೆಯಿಂದ ಸಾಮಾನ್ಯ ವಿಮಾನಗಳ ಹಾರಾಟವನ್ನು ಏರ್ ಲೈನ್ಸ್ ಸಂಸ್ಥೆಗಳು ಆರಂಭಿಸಲಿವೆ. ಸ್ಪೈಸ್ ಜೆಟ್ ಹೆಚ್ಚುವರಿ ವಿಮಾನಗಳನ್ನು ಆರಂಭಿಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!