February 2, 2026
Monday, February 2, 2026
spot_img

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಂಧ್ರಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವೈಎಸ್‌ಆರ್‌ಸಿಪಿ ನಾಯಕ ಜೋಗಿ ರಮೇಶ್ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ವೈಎಸ್‌ಆರ್‌ಸಿಪಿ ಹಿರಿಯ ನಾಯಕ ಅಂಬಟಿ ರಾಂಬಾಬು ಅವರ ಮೇಲೆ ಕೊಲೆ ಯತ್ನ ನಡೆದಿದೆ ಎನ್ನುವ ಮಾಹಿತಿ ಹೊರಬಂದ ಬಳಿಕ ಈ ಘಟನೆ ನಡೆದಿದೆ.

ಇಬ್ರಾಹಿಂಪಟ್ಟಣದಲ್ಲಿ ಹಲವಾರು ಗಂಟೆಗಳ ಕಾಲ ಹೈ ಡ್ರಾಮಾ ನಡೆಯಿತು. ದಾಳಿಯನ್ನು ದೃಢಪಡಿಸಿದ ಪಶ್ಚಿಮ ವಲಯದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ದುರ್ಗಾ ರಾವ್, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪಿಟಿಐಗೆ ತಿಳಿಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುತ್ತಿದ್ದಾರೆ ಎಂದು ಎಸಿಪಿ ಮಾಹಿತಿ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !