ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಗಂತ ವರದಿ, ಬೆಂಗಳೂರು

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ
ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!