ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಶುರುವಾಗಲು ಚಿನ್ನಸ್ವಾಮಿ ಕ್ರೀಡಾಂಗಣ ರೆಡಿಯಾಗಿದ್ದು, ಇತ್ತ ಬೆಂಗಳೂರಿನಲ್ಲಿ ಮಳೆರಾಯ (Rain) ಆರ್ಭಟಿಸುತ್ತಿದ್ದಾನೆ.
ಶನಿವಾರಸಂಜೆ ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಕಬ್ಬನ್ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆ.ಆರ್.ಮಾರ್ಕೆಟ್, ಮೆಜೆಸ್ಟೆಕ್, ರಾಜಾಜಿನಗರ, ಲಾಲ್ಬಾಗ್, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ಇಂದು ರಾತ್ರಿ 7:30ಕ್ಕೆ ಆರ್ಸಿಬಿ ವರ್ಸಸ್ ಕೆಕೆಆರ್ ಪಂದ್ಯ ಆರಂಭವಾಗಲಿದೆ. ಆದರೆ, ಪಂದ್ಯ ಆರಂಭಕ್ಕೂ ಮುನ್ನ ಮಳೆಯಾಗುತ್ತಿರುವುದರಿಂದ ಆರ್ಸಿಬಿ ಅಭಿಮಾನಿಗಳಲ್ಲಿ ನಿರಾಶೆ ಮೂಡಿದೆ.
ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ನಗರದ ಹಲವು ರಸ್ತೆಗಳ ಮೇಲೆ ನೀರು ನಿಂತಿದೆ. ಹೆಬ್ಬಾಳದಲ್ಲಿ ಮಳೆ ಬರುತ್ತಿರುವುದರಿಂದ ವೀರಣ್ಣಪಾಳ್ಯ ಕಡೆಯಿಂದ ಹೆಬ್ಬಾಳ ಕಡೆ ಹೋಗುವ ರಸ್ತೆಯಲ್ಲಿ ತೀವ್ರ ಸಂಚಾರದಟ್ಟಣೆ ಉಂಟಾಗಿದೆ.ವರ್ತೂರು ಕಡೆಯಿಂದ, ವೈಟಫಿಲ್ಡ್ ಕಡೆಗೆ ಹೋಗುವ ಮಾರ್ಗದಲ್ಲಿ, ಕಸ್ತೂರಿನಗರ ಕಡೆಯಿಂದ ಹೆಬ್ಬಾಳ ಮುಖ್ಯ ರಸ್ತೆಯ ಕಡೆಗೆ ಹೋಗುವ ಮಾರ್ಗದಲ್ಲಿ, ಬಾಗಲೂರು ಕಡೆಯಿಂದ ನಗರ ಮತ್ತು ವಿಮಾನ ನಿಲ್ದಾಣದ ಕಡೆಗೆ ಸಂಚರಿಸುವ ರಸ್ತೆಯಲ್ಲಿ ಮತ್ತು ನ್ಯಾಷನಲ್ ಗೇಮ್ಸ್ ವಿಲೇಜ್ ಗೆಟ್ನಿಂದ ಸೋನಿ ವರ್ಲ್ಡ್ ಜಂಕ್ಷನ್ ಕಡೆಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಿಧಾನವಾಗಿ ಚಲಿಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.