ನಟ ದರ್ಶನ್ ಮೇಕಪ್ ಆರ್ಟಿಸ್ಟ್ ನಿಧನ: ಸಂತಾಪ ಸೂಚಿಸಿದ ಡಿ ಬಾಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಟ ದರ್ಶನ್ ಅವರ ಸಿನಿಮಾಗಳಿಗೆ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ ಹೊನ್ನೆ ಗೌಡ ಅವರು ನಿಧನರಾಗಿದ್ದಾರೆ.

ಸೋಶಿಯಲ್ ಮೀಡಿಯಾ ಮೂಲಕ ಅವರು ಹೊನ್ನೆ ಗೌಡರ ಆತ್ಮಕ್ಕೆ ನಟ ದರ್ಶನ್ ಶಾಂತಿ ಕೋರಿದ್ದಾರೆ. ಅಲ್ಲದೇ, ಕುಟುಂಬದವರಿಗೆ ಸಂತಾಪ ಸೂಚಿಸಿದ್ದಾರೆ.

ಅನೇಕ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಹೊನ್ನೆ ಗೌಡ ಅವರು ಸಕ್ರಿಯವಾಗಿದ್ದರು. ಹಲವು ಸಿನಿಮಾಗಳಿಗೆ ಅವರು ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದರು. ಅವರ ನಿಧನಕ್ಕೆ ಚಿತ್ರರಂಗದ ಹಲವರು ಕಂಬನಿ ಮಿಡಿದಿದ್ದಾರೆ.

’25 ವರ್ಷಗಳಿಂದ ನನ್ನೊಂದಿಗೆ ಕೆಲಸ ಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ಇಂದು ಅಗಲಿದ ಸುದ್ದಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೆ ಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ’ ಎಂದು ನಟ ದರ್ಶನ್ ಪೋಸ್ಟ್ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!