ಹೊಸದಿಗಂತ ಡಿಜಿಟಲ್ ಡೆಸ್ಕ್:
ವರುಣಾರ್ಭಟಕ್ಕೆ ದೇವಿಮನೆ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿಯೇ ಜಲಾವೃತವಾಗಿದ್ದು, ಕುಮಟಾ-ಶಿರಸಿ ಸಂಪರ್ಕ ಕಡಿತಗೊಂಡಿದೆ.
ಕಳೆದ ಒಂದು ವರ್ಷದಿಂದ ಹೆದ್ದಾರಿ ಕಾಮಗಾರಿ ನಡೆಯುತಿತ್ತು. ಶುಕ್ರವಾರ ಸುರಿದ ಭಾರೀ ಮಳೆಗೆ ರಸ್ತೆಯೇ ಜಲಾವೃತವಾಗಿದೆ. ಹೊಳೆ ಹಳ್ಳದ ನೀರು ಹರಿದು ಬಂದು ಹೆದ್ದಾರಿಯ ಬದಿಯಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯೂ ನಾಶವಾಗಿದೆ.
ರಸ್ತೆ ಕೊಚ್ಚಿಹೋಗಿದ್ದರಿಂದ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಕುಮಟಾ ಮೂಲಕ ದೇವಿಮನೆ ಘಟ್ಟ ಭಾಗದಲ್ಲಿ ಸಂಚಾರ ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.