ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಉರ್ದು ಬಾಣ ಬಿಟ್ಟಿದೆ. ಬಜೆಟ್ನಲ್ಲಿ ಭಾಷಾ ಅಭಿವೃದ್ಧಿಗೆ ಅನುದಾನದಲ್ಲಿ ತಾರತಮ್ಯ ಮಾಡಿದೆ. ಉರ್ದುಗೆ 100 ಕೋಟಿ ಅನುದಾನ ಕೊಟ್ಟಿದ್ದು, ಕನ್ನಡಕ್ಕೆ ಬರೀ 32 ಕೋಟಿ ಕೊಟ್ಟಿದೆ ಅಂತ ಬಿಜೆಪಿ ಆರೋಪ ಮಾಡಿದೆ.
ಇದು ಭಂಡ ಹಾಗೂ ಭ್ರಷ್ಟರ ಉರ್ದು ಪ್ರೇಮ.. ನಾಡದ್ರೋಹಿ ಕಾಂಗ್ರೆಸ್.. ಸಿದ್ದರಾಮಯ್ಯಗೆ ಉರ್ದು ಪ್ರೇಮ ಅಂತ ಬಿಜೆಪಿ ಕಾರ್ಟೂನ್ ಸಮೇತ ಎಕ್ಸ್ನಲ್ಲಿ ಪೋಸ್ಟ್ ಹಾಕಿ ಲೇವಡಿ ಮಾಡಿದೆ.
ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ @BJP4Karnataka ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ. ಒಂದು ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್ ಗಳ ರೀತಿ… pic.twitter.com/pLVPueBne7
— Siddaramaiah (@siddaramaiah) May 27, 2025
ಈ ಬೆನ್ನಲ್ಲೇ ಸಿಎಂ ಸಿದ್ದು ಕೂಡ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ಬಿಜೆಪಿಗರ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದೆ. ಬಿಜೆಪಿ ತಕ್ಷಣ ಸ್ಪಷ್ಟೀಕರಣದ ಮೂಲಕ ಸತ್ಯ ಸಂಗತಿಯನ್ನು ತಿಳಿಸಬೇಕು. ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.