SHOCKING | ನೀರು ತರುತ್ತಿದ್ದ ವೇಳೆ ಏಕಾಏಕಿ ಎದೆನೋವು, ಹೃದಯಾಘಾತದಿಂದ ಯುವತಿ ಸಾವು

ಹೊಸದಿಗಂತ ವರದಿ ಹಾಸನ :

ನೀರು ತರುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಸಾವನ್ನಲ್ಲಿರುವ ಘಟನೆ ತಾಲ್ಲೂಕಿನ, ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.

ಕೆಲವತ್ತಿ ಗ್ರಾಮದ ಪಾಪಣ್ಣ-ಗಾಯತ್ರಿ ದಂಪತಿ ಪುತ್ರಿ ಕವನ.ಕೆ.ವಿ‌ (21) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿನಿ. ಸಂಜೆ ಮನೆಗೆ ನೀರು ತರುತ್ತಿದ್ದ ಕವನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾರೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದಿದ್ದ ಕವನಳನ್ನು ಕೂಡಲೇ ಪೋಷಕರು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ.
ಅಷ್ಟರಲ್ಲಿ ಕವನ.ಕೆ.ವಿ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕವನ ಅಂತಿಮ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದರು. ಮೂರು ವಿಷಯಗಳ ಪರೀಕ್ಷೆ ಬರೆದಿದ್ದ ಕವನ.ಕೆ.ವಿ. ಇನ್ನೂ ಮೂರು ಎಕ್ಸಾಂಗಳನ್ನು ಬರೆಯಬೇಕಿತ್ತು. ನಾಳೆ ನಾಲ್ಕನೇ ವಿಷಯದ ಪರೀಕ್ಷೆ ಬರೆಯಬೇಕಿದ್ದ ಕವನ ಕೊನೆಯುಸಿರೆಳೆದಿದ್ದಾರೆ. ಸಹಪಾಠಿಗಳು ಹಾಗೂ ಕಾಲೇಜು ಉಪನ್ಯಾಸಕ ವರ್ಗದಲ್ಲಿ ಮಡುಗಟ್ಟಿದ ಶೋಕ ಇತ್ತ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!