ಬಂಟ್ವಾಳ ರಹಿಮಾನ್ ಕೊಲೆ ಪ್ರಕರಣ: ಮೂವರ ಬಂಧನದ ಬೆನ್ನಿಗೆ ಮತ್ತಿಬ್ಬರು ಪೊಲೀಸ್ ವಶಕ್ಕೆ?

ಹೊಸದಿಗಂತ ವರದಿ, ಬಂಟ್ವಾಳ:

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ರಹಿಮಾನ್ ಹತ್ಯೆ ಹಾಗೂ ಶಾಫಿ ಎಂಬವರ ಮೇಲಿನ ಮಾರಣಾಂತಿಕ ಹಲ್ಲೆಗೆ ಸಂಬಂಧಿಸಿ ವಿಶೇಷ ಪೊಲೀಸ್ ತಂಡ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಅಧಿಕೃತವಾಗಿ ಬಂಧಿಸಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಪ್ರಕಟಿಸಿದ ಬೆನ್ನಲ್ಲೆ ಇನ್ನಿಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದರೊಂದಿಗೆ ಈ ಘಟನೆಗೆ ಸಂಬಂಧಿಸಿ ಬಂಧಿತರ ಸಂಖ್ಯೆ ಐದಕ್ಕೇರಿದೆ.

ದೀಪಕ್ ,ಪ್ರಥ್ವಿರಾಜ್, ಚಿಂತನ್ ಎಂಬವರನ್ನು ಬಂಧಿಸಲಾಗಿದ್ದು,ಇದೀಗ ಸುಮಿತ್ ಹಾಗೂ ರವಿರಾಜ್ ಎಂಬವರನ್ನು ವಿಶೇಷ ಪೊಲೀಸ್ ತಂಡ ವಶಕ್ಕೆ ಪಡೆದಿದೆ .

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!