ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚೈಬಾಸಾದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಮ್ಮ ವಿರುದ್ಧ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್ ಪ್ರಶ್ನಿಸಿ ಜಾರ್ಖಂಡ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಮೇ 22, 2025 ರಂದು, ಚೈಬಾಸಾ ನ್ಯಾಯಾಲಯವು ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ ಬಂಧ ವಾರಂಟ್ ಹೊರಡಿಸಿ, ಜೂನ್ 26 ರಂದು ಖುದ್ದಾಗಿ ಹಾಜರಾಗುವಂತೆ ನಿರ್ದೇಶಿಸಿದೆ.
ಇದಕ್ಕೂ ಮೊದಲು, ಅವರ ವಕೀಲರು ಸಿಆರ್ಪಿಸಿಯ ಸೆಕ್ಷನ್ 205 ರ ಅಡಿಯಲ್ಲಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ಮನವಿಯನ್ನು ತಿರಸ್ಕರಿಸಿತು ಮತ್ತು ಅವರು ಖುದ್ದಾಗಿ ಹಾಜರಾಗಬೇಕು ಎಂದು ಸೂಚಿಸಿತ್ತು.
ರಾಹುಲ್ ಗಾಂಧಿ ಅವರು ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ, ತಾವು ಈಗಾಗಲೇ ಹಾಜರಾತಿಯಿಂದ ವಿನಾಯಿತಿ ಕೋರಿ ಜಾರ್ಖಂಡ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಅದು ಇನ್ನೂ ಬಾಕಿ ಇದೆ. ಅಂತಹ ಪರಿಸ್ಥಿತಿಯಲ್ಲಿ, ಚೈಬಾಸಾ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿರುವುದು ಅನ್ಯಾಯ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಮಾರ್ಚ್ 18, 2018 ರಂದು ದೆಹಲಿಯಲ್ಲಿ ನಡೆದ ಎಐಸಿಸಿ ಸಮಗ್ರ ಅಧಿವೇಶನದಲ್ಲಿ ರಾಹುಲ್ ಗಾಂಧಿ, ಬಿಜೆಪಿ ನಾಯಕರನ್ನು “ಕೊಲೆಗಾರರು” ಮತ್ತು “ಸುಳ್ಳುಗಾರರು” ಎಂದು ಕಟುವಾಗಿ ಟೀಕಿಸಿದ್ದರು ಎಂದು ವರದಿಯಾಗಿದೆ.