ಭದ್ರತೆ ದೃಷ್ಟಿಯಿಂದ ಆರ್‌ಸಿಬಿ ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ: ಗೃಹ ಸಚಿವ ಪರಮೇಶ್ವರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಈ ಬಾರಿಯ ಐಪಿಎಲ್ -2025ನಲ್ಲಿ ಕಪ್ ಗೆದ್ದು ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನು ಕೆಲವೇ ಹೊತ್ತಿನಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ.

ಸಂಜೆ 6 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ ನಡೆಯಲಿದೆ. ಅದಕ್ಕೂ ಮೊದಲು ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತಂಡದ ಆಟಗಾರರ ವಿಜಯೋತ್ಸವ ಮೆರವಣಿಗೆಯನ್ನು ನಡೆಸುವುದೆಂದು ತೀರ್ಮಾನವಾಗಿತ್ತು.

ಆದರೆ ವಿಜಯೋತ್ಸವ ಮೆರವಣಿಗೆ ಕೊನೆಕ್ಷಣದಲ್ಲಿ ರದ್ದಾಗಿದೆ. ತೆರೆದ ವಾಹನದಲ್ಲಿ ಆರ್​ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೊ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!