ಹೊಸದಿಗಂತ ಡಿಜಿಟಲ್ ಡೆಸ್ಕ್:
RCB ತಂಡಕ್ಕೆ ಸನ್ಮಾನ, ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ. ಇಂದು ಸಂಜೆ ವಿಧಾನಸೌಧದ ಮೇಲೆ ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಿಸಲಾಗುತ್ತಿದೆ.
ವಿಜಯೋತ್ಸವದ ಹಿನ್ನೆಲೆಯಲ್ಲಿ RCB ಮ್ಯಾನೇಜ್ಮೆಂಟ್ ಅಭಿಮಾನಿಗಳಿಗೆ ಇದೀಗ ಗುಡ್ನ್ಯೂಸ್ ಕೊಟ್ಟಿದೆ. ಇಂದು ಸಂಜೆ ಚಿನ್ನಸ್ವಾಮಿ ಸ್ಟೇಡಿಯಂಗೆ ಉಚಿತ ಪಾಸ್ ನೀಡಲಾಗುತ್ತಿದ್ದು, ವೆಬ್ಸೈಟ್ ಮೂಲಕ ಪಾಸ್ ಬುಕ್ ಮಾಡಲು ಅವಕಾಶ ನೀಡಿದೆ.
ಅಭಿಮಾನಿಗಳ ಸಾಗರ ಹೆಚ್ಚಾಗುತ್ತಿದ್ದಂತೆ ಆರ್ಸಿಬಿ ಅಧಿಕೃತ ಪೇಜ್ನಲ್ಲಿ shop.royalchallengers.com ಟಿಕೆಟ್ಸ್ ಬುಕ್ ಮಾಡಿಕೊಳ್ಳಲು ಅವಕಾಶ ನೀಡಿದೆ. ಕೆಲವೇ ಕ್ಷಣಗಳಲ್ಲಿ ಆರ್ಸಿಬಿ ಮ್ಯಾನೇಜ್ಮೆಂಟ್ ಲಿಂಕ್ ಅಪ್ಡೇಟ್ ಮಾಡಲಿದೆ ಎನ್ನಲಾಗಿದೆ.