ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ಸರಳಗೊಳಿಸಲಾಗಿದ್ದು, ಇನ್ನು ನೋಂದಣಿ ಸಂದರ್ಭದಲ್ಲಿ ಉಪನೋಂದಣಾಧಿಕಾರಿ ಕಂದಾಯ ರಶೀದಿ ಪರಿಶೀಲಿಸುವುದರಿಂದ ಪ್ರತ್ಯೇಕವಾಗಿ ನಿರಾಕ್ಷೇಪಣಾ ಪತ್ರ ಮತ್ತು ಋಣಭಾರ ರಾಹಿತ್ಯ ಪತ್ರ ಸಲ್ಲಿಸುವ ಅಗತ್ಯವಿಲ್ಲ ಎಂಬ ಆದೇಶ ಹೊರಬಿದ್ದಿದೆ.
ಲೆಫ್ಟಿನೆಂಟ್ ಗವರ್ನರ್ ಮತ್ತು ದ್ವೀಪಗಳ ಅಭಿವೃದ್ಧಿ ಏಜೆನ್ಸಿಯ ಉಪಾಧ್ಯಕ್ಷ ನಿವೃತ್ತ ಅಡ್ಮಿರಲ್ ಡಿ.ಕೆ. ಜೋಶಿ ಶನಿವಾರ ಈ ಆದೇಶ ಹೊರಡಿಸಿದ್ದಾರೆ. ಜೂ.9ರಿಂದ ಈ ಆದೇಶ ಕಾರ್ಯರೂಪಕ್ಕೆ ಬರಲಿದ್ದು, ಇದರಿಂದ ದ್ವೀಪದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಸಂದರ್ಭ ಈ ಹಿಂದೆ ಇದ್ದ ಆಸ್ತಿ ಮೌಲ್ಯಮಾಪನ ಪ್ರಮಾಣಪತ್ರವನ್ನೂ ರದ್ದುಗೊಳಿಸಲಾಗಿದೆ. ಈ ಪದ್ಧತಿ ಅಂಡಮಾನ್ ಮತ್ತು ನಿಕೋಬಾರ್ನಲ್ಲಿ ದ್ವೀಪದಲ್ಲಿ ಮಾತ್ರ ಇದೆ. ದೇಶದ ಯಾವುದೇ ರಾಜ್ಯಗಳಲ್ಲಿಲ್ಲ. ಹೀಗಾಗಿ ಇದನ್ನು ರದ್ದುಗೊಳಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದರು. ಇನ್ನು ದ್ವೀಪದಲ್ಲಿ ಇಂಧನ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಅಲ್ಲಲ್ಲಿ ಪೆಟ್ರೋಲ್ ಬಂಕ್ಗಳನ್ನು ತೆರೆಯಲು ಅನುಮತಿ ನೀಡಲು ನಿರ್ಧರಿಸಲಾಗಿದೆ. ದೋಣಿ ಪರವಾನಗಿ ನವೀಕರಣದ ಸಂದರ್ಭದಲ್ಲಿ ಕಂದಾಯ ಇಲಾಖೆ ಪ್ರತಿ ವರ್ಷ ನಡೆಸುತ್ತಿದ್ದ ಸಮೀಕ್ಷೆಯನ್ನೂ ತಕ್ಷಣದಿಂದಲೇ ಜಾರಿಗೆ ಬರುವಂತೆ ಲೆಫ್ಟಿನೆಂಟ್ ಗವರ್ನರ್ ರದ್ದುಗೊಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ