ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಗಾಳಿ-ಮಳೆಯಿಂದ ಸೃಷ್ಟಿಯಾದ ಅವಾಂತರಗಳಿಂದ ಜನರು ಹೈರಾಣಾಗಿದ್ದಾರೆ. ಸೊಲ್ಲಾಪುರದಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತಗೊಂಡ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ತನಿಕೋಡು ಚೆಕ್ಪೋಸ್ಟ್ನಿಂದ ಎಸ್.ಕೆ. ಗಡಿಯವರೆಗೆ ಇಂದು (ಜೂ.17) ರಾತ್ರಿಯಿಂದ ಜೂನ್ 20ರ ಬೆಳಗ್ಗೆ 8ರವರೆಗೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ಮಾದರಿಯ ವಾಹನ ಸಂಚಾರಕ್ಕೆ ಜಿಕ್ಕಮಗಳೂರು ಜಿಲ್ಲಾಡಳಿತ ನಿರ್ಬಂಧಿಸಿದೆ.
ಬದಲಿ ಮಾರ್ಗವಾದ ಬಾಳೆಹೊನ್ನೂರು, ಮಾಗುಂಡಿ, ಕಳಸ, ಕುದುರೆಮುಖ ಮುಖಾಂತರ ಎಸ್.ಕೆ.ಬಾರ್ಡರ್ಗೆ ತಲುಪುವಂತೆ ವಾಹನ ಸವಾರರಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದ್ದಾರೆ.