ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್ಗೆ ಮಳಿಗೆ ಹಂಚಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಂಚಿಕೆ ಪ್ರಕ್ರಿಯೆಯಲ್ಲಿ ಯಾವುದೇ ಪಕ್ಷಪಾತ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಅಮುಲ್ಗೆ 10 ಮಳಿಗೆಗಳ ಹಂಚಿಕೆ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವಂತೆಯೇ ಅವರು ಈ ರೀತಿ ಹೇಳಿದ್ದಾರೆ. ರಾಜ್ಯ ಸರ್ಕಾರ ನಂದಿನಿಗಿಂತಲೂ ಅಮುಲ್ ಅನ್ನು ಪ್ರಚಾರ ಮಾಡುತ್ತಿದೆ ಎಂದು ಜೆಡಿಎಸ್ ಮತ್ತು ಕನ್ನಡ ಪರ ಕಾರ್ಯಕರ್ತರು ಆರೋಪಿಸಿದ್ದಾರೆ.
ಆದರೆ ಮೆಟ್ರೋವನ್ನು ಕೇಂದ್ರ ಸರ್ಕಾರ ನಿರ್ವಹಿಸುತ್ತಿದ್ದು, ಈ ಬಗ್ಗೆ ಅವರನ್ನು ಪ್ರಶ್ನಿಸಬೇಕು ಎಂದು ರಾಜ್ಯ ಸರ್ಕಾರ ಹೇಳಿದೆ. ವಿವಾದದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಅಮುಲ್ಗೆ ನೀಡಿರುವ 10 ಸ್ಥಳಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ಬಿಎಂಆರ್ಸಿಎಲ್ಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.