ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೈಲಟ್ಗಳು ‘ಮೇಡೇ’ ಎಂದು ಘೋಷಿಸಿದ ನಂತರ ಗುವಾಹಟಿ-ಚೆನ್ನೈ ಇಂಡಿಗೋ ವಿಮಾನ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿತು ಎಂದು ಮೂಲಗಳು ತಿಳಿಸಿವೆ.
ಲಂಡನ್ಗೆ ಹೋಗುತ್ತಿದ್ದ ಏರ್ ಇಂಡಿಯಾ ಡ್ರೀಮ್ಲೈನರ್ ವಿಮಾನವು ಕೆಲವು ದಿನಗಳ ಹಿಂದೆ ಅಹಮದಾಬಾದ್ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿತ್ತು. ಆ ವೇಳೆ ಕೂಡ ಪೈಲಟ್ ಮೇಡೇ ಘೋಷಿಸಿದ್ದರು. ಆದರೆ, ಅದಕ್ಕೆ ಪ್ರತಿಕ್ರಿಯಿಸುವ ಮುನ್ನ ವಿಮಾನ ಅಪಘಾತಕ್ಕೀಡಾಗಿತ್ತು. ಅದಾದ ಕೇವಲ ಒಂದು ವಾರದ ನಂತರ ಈ ಘಟನೆ ನಡೆದಿದೆ.
ಇಂಧನದ ಪರೀಕ್ಷೆ ಮಾಡಿಕೊಳ್ಳದೆ ಹಾರಾಟಕ್ಕೆ ಮುಂದಾಗಿದ್ದಕ್ಕೆ ಆ ವಿಮಾನದ ಇಬ್ಬರಯ ಪೈಲಟ್ಗಳನ್ನೂ ಅಮಾನತುಗೊಳಿಸಲಾಗಿದೆ ಎಂದು ಕೆಲವು ವರದಿಗಳು ತಿಳಿಸಿವೆ. ಆದರೆ, ಇಂಡಿಗೋ ಈ ಬಗ್ಗೆ ಹೇಳಿಕೆ ನೀಡಿಲ್ಲ.
ಬಳಿಕ ಚೆನ್ನೈಗೆ ಹಿಂತಿರುಗಲು ಮತ್ತು ಲ್ಯಾಂಡ್ ಆಗಲು ಅನುಮತಿ ಕೋರಿತು. ಸುಮಾರು 68 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸುರಕ್ಷಿತವಾಗಿ ಇಳಿಯಿತು ಮತ್ತು ಎಲ್ಲಾ ಪ್ರಯಾಣಿಕರನ್ನು ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಕೆಳಗಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.