ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಶಿಗ್ಗಾಂವಿ ಪಟ್ಟಣದ ಹೊರವಲಯದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಪ್ರಥಮ ದರ್ಜೆಯ ಗುತ್ತಿಗೆದಾರ ಶಿವಾನಂದ ಕುನ್ನೂರು (40 ವರ್ಷ) ಕೊಲೆಯಾದವರು.
ಶಿವಾನಂದ ಕುನ್ನೂರು ಹೊಟೇಲ್ನಲ್ಲಿ ಊಟ ಮಾಡಿ ವಾಪಸ್ ಕಾರಿನಲ್ಲಿ ಹೋಗುತ್ತಿದ್ದ ವೇಳೆ 6 ರಿಂದ 7 ಜನರು ಅಟ್ಯಾಕ್ ಮಾಡಿ, ಕಬ್ಬಿಣದ ರಾಡ್ ಮತ್ತು ತಲಾವಾರ್ ನಿಂದು ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಸ್ತಿ ವ್ಯಾಜ್ಯದಿಂದ ಕೊಲೆ ಮಾಡಲಾಗಿದೆ ಎಂದು ಕುಟುಂಬದ ಸದಸ್ಯರು ಆರೋಪ ಮಾಡಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.