ಕೇರಳದ ವಯನಾಡಿನ ಚೂರಲ್ಮಾಲಾದಲ್ಲಿ ಮತ್ತೆ ಪ್ರವಾಹ, ಭೂಕುಸಿತ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ವಯನಾಡಿನಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಭೀತಿ ಎದುರಾಗಿದೆ. ಕಳೆದ ವರ್ಷ 200ಕ್ಕೂ ಹೆಚ್ಚು ಜನರು ಮೃತಪಟ್ಟು, ನೂರಾರು ಮಂದಿ ನಿರಾಶ್ರಿತರಾಗಿದ್ದ ಕೇರಳದ ವಯನಾಡಿನ ಮುಂಡಕ್ಕೈ, ಚೂರಲ್ಮಾಲಾ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ, ಭೂಕುಸಿತದ ಭೀತಿ ಎದುರಾಗಿದೆ.

ಚೂರಲ್ಮಲಾ ನದಿಯು ಉಕ್ಕಿ ಹರಿಯುತ್ತಿದ್ದು, ಕೆಸರಿನ ನೀರಿನೊಂದಿಗೆ ಬೈಲಿ ಸೇತುವೆ ಮೇಲೆ ಹರಿಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಬುಧವಾರ ವರದಿ ಮಾಡಿದ್ದಾರೆ. ನವೀಕರಣ ಕಾರ್ಯಕ್ಕಾಗಿ ನದಿಯ ಎರಡೂ ದಡಗಳಲ್ಲಿ ಸಂಗ್ರಹಿಸಲಾಗಿದ್ದ ಮಣ್ಣು ಕೊಚ್ಚಿಕೊಂಡು ಹೋಗಿದ್ದು, ಅಟ್ಟಮಲ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ಹರಿಯುತ್ತಿದೆ. ಬೆಟ್ಟಗಳಲ್ಲಿ ಮತ್ತೆ ಭೂಕುಸಿತಗಳು ಸಂಭವಿಸಿವೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ಆದರೆ, ಇದುವರೆಗೆ ಯಾವುದೇ ದೃಢೀಕರಣ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುಂಚಿರಿಮಟ್ಟಂ ಬೆಟ್ಟದ ಅರಣ್ಯದೊಳಗೆ ಮತ್ತೆ ಭೂಕುಸಿತ ಸಂಭವಿಸಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ತಿಳಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!