ಆರ್‌ಸಿಬಿ ಮ್ಯಾಚ್‌ ವೇಳೆ ಉಚಿತ ಟಿಕೆಟ್‌ ಘೋಷಣೆ ಮಾಡಿದ್ದೇ ಕಾಲ್ತುಳಿತಕ್ಕೆ ಕಾರಣ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉಚಿತ ಟಿಕೆಟ್‌ ಎಂದು ಘೋಷಣೆ ಮಾಡಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತು ಎಂದು ಅಮಾನತಾಗಿರುವ ಐಪಿಎಸ್‌ ಅಧಿಕಾರಿ ದಯಾನಂದ್‌ ತಿಳಿಸಿದ್ದಾರೆ ಎನ್ನಲಾಗಿದೆ.

ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದ ಮ್ಯಾಜಿಸ್ಟ್ರೇಟ್ ತನಿಖೆ ಮುಕ್ತಾಯದ ಹಂತಕ್ಕೆ ಬಂದಿದೆ. ವಿಚಾರಣೆಯ ಪ್ರಮುಖ ಭಾಗವಾದ ದಯಾನಂದ್‌ ಅವರ ಹೇಳಿಕೆಯನ್ನು ದಾಖಲು ಮಾಡಲಾಗಿದೆ.

ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ ವಿಚಾರಣೆಗೆ ಹಾಜರಾದ ದಯಾನಂದ್‌ ಅಂದು ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ. ಘಟನೆ ನಡೆದ ದಿನ 21 ಗೇಟ್‌ಗಳಿಗೂ ನಾನೇ ಖುದ್ದಾಗಿ ಭೇಟಿ ನೀಡಿದ್ದೆ ಸಂಪೂರ್ಣವಾಗಿ ಬಂದೋಬಸ್ತ್‌ ಮಾಡಿಕೊಳ್ಳಲಾಗಿತ್ತು.

ಪ್ರತಿ ಬಾರಿ ಐಪಿಎಲ್ ಮ್ಯಾಚ್ ನಡೆಯುವಾಗ ಇರುವಷ್ಟು ಬಂದೋಬಸ್ತ್‌ ಮಾಡಿಕೊಳ್ಳಲಾಗಿತ್ತು. ಆದರೆ ಅಂದು ಗೇಟ್ ತೆಗೆಯಲು ತಡಮಾಡಿದ್ದರು. ಉಚಿತ ಟಿಕೆಟ್‌ ಎಂದು ಘೋಷಣೆ ಮಾಡಿದ್ದರಿಂದ ಇಷ್ಟೆಲ್ಲ ಅವಾಂತರ ನಡೆದಿದೆ ಎಂದು ಹೇಳಿಕೆ ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!