ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣ: ಇಬ್ಬರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

2023ರ ಡಿಸೆಂಬರ್‌ 13ರಂದು ನಡೆದಿದ್ದ ಸಂಸತ್ತಿನ ಭದ್ರತಾ ಲೋಪ ಪ್ರಕರಣದ ಇಬ್ಬರು ಆರೋಪಿಗಳಿಗೆ ದೆಹಲಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ದ್ವಿಸದಸ್ಯ ಪೀಠವು ನೀಲಂ ಆಜಾದ್, ಮಹೇಶ್ ಕುಮಾವತ್‌ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆರೋಪಿಗಳಿಗೆ ತಲಾ 50,000 ರೂ. ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಪ್ರಕರಣ ಮುಗಿಯುವವರೆಗೆ ದೆಹಲಿ ಬಿಟ್ಟು ಹೋಗದಂತೆ ಸೂಚಿಸಿರುವ ಕೋರ್ಟ್‌ ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 10 ಗಂಟೆ ವೇಳೆಗೆ ಗೊತ್ತುಪಡಿಸಿದ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿದೆ. ಹೈಕೋರ್ಟ್‌ ಛೀಮಾರಿ; ಐವರು ಪೊಲೀಸರು ಅರೆಸ್ಟ್‌

ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಕೋರ್ಟ್‌ ಮಾಸ್ಟರ್‌ ಮೈಂಡ್‌ಗಳಾದ ಸಾಗರ್ ಶರ್ಮಾ ಮತ್ತು ಮನೋರಂಜನ್‌ಗೆ ಜಾಮೀನು ನಿರಾಕರಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!