ಮೆಟ್ರೋ ದರ ಏರಿಕೆ ವರದಿ ಬಹಿರಂಗಗೊಳಿಸದ ವಿಚಾರ: ರಾಜ್ಯ ಸರ್ಕಾರ, ಮೆಟ್ರೋ ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೆಟ್ರೋ ದರ ಏರಿಕೆಗೆ ಕಾರಣವಾದ ವರದಿಯನ್ನು ಬಿಡುಗಡೆ ಮಾಡುವಂತೆ ಕೋರಿ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಮೆಟ್ರೋ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆಗೆ ಆಧಾರವಾಗಿರುವ ವರದಿಯನ್ನು ಬಹಿರಂಗಪಡಿಸದ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಪ್ರಶ್ನಿಸಿ ತೇಜಸ್ವಿ ಸೂರ್ಯ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ಪರಿಗಣಿಸಿದ ನಂತರ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ನೇತೃತ್ವದ ಪೀಠವು ಸಂಬಂಧಪಟ್ಟ ಪಕ್ಷಗಳಿಗೆ ನೋಟಿಸ್ ಜಾರಿ ಮಾಡಿ, ಪ್ರವೇಶ ದಿನಾಂಕದಿಂದ ಎರಡನೇ ವಾರದಲ್ಲಿ ವಿಚಾರಣೆಗೆ ನಿಗದಿಪಡಿಸಿತು. ಆಶ್ಚರ್ಯ ವ್ಯಕ್ತಪಡಿಸಿದ ಪೀಠ, ಸಂಸದರಾಗಿ ಬಿಎಂಆರ್‌ಸಿಎಲ್‌ನಿಂದ ವರದಿಯನ್ನು ಪಡೆಯಲು ಸಾಧ್ಯವಿಲ್ಲವೇ? ಎಂದು ಪ್ರಶ್ನಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!