ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದ ಅನ್ನಭಾಗ್ಯ ಯೋಜನೆಗೆ 10 ಕೆಜಿ ಅಕ್ಕಿ ಪಡೆದುಕೊಳ್ಳುತ್ತಿರುವ ಫಲಾನುಭವಿಗಳಿಗೆ ಈಗ ಶಾಕ್ ಎದುರಾಗಿದೆ.
ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್ ಆಗಿದೆ. ಆಹಾರ ಧಾನ್ಯ ಸಾಗಾಣಿಕೆ ವೆಚ್ಚವನ್ನು ಸರ್ಕಾರ ಬಾಕಿ ಉಳಿಸಿಕೊಂಡಿರುವುದೇ ಇದಕ್ಕೆ ಕಾರಣ. ಅನ್ನಭಾಗ್ಯ ಆಹಾರ ಧಾನ್ಯಗಳನ್ನು ಸಾಗಿಸುವ ಲಾರಿಗಳಿಗೆ ಸರ್ಕಾರ ನೀಡಬೇಕಾಗಿದ್ದ ಹಣವನ್ನು ಪಾವತಿಸಿಲ್ಲ.
ಹೀಗಾಗಿ ರಾಜ್ಯ ಸರ್ಕಾರಕ್ಕೆ ಲಾರಿ ಮಾಲೀಕರ ಸಂಘ 15 ದಿನ ಗಡುವು ನೀಡಿತ್ತು. ಆದಾಗ್ಯೂ ಸರ್ಕಾರ ಯಾವುದೇ ರೀತಿಯಲ್ಲೂ ಸ್ಪಂದಿಸಲಿಲ್ಲ. ಹೀಗಾಗಿ ಇಂದಿನಿಂದ ಅನ್ನಭಾಗ್ಯ ಆಹಾರ ಸಾಗಿಸುವ ಲಾರಿಗಳ ಸಂಚಾರ ಬಂದ್ ಮಾಡಲಾಗಿದೆ.
ಈ ನಡುವೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಅನ್ನಭಾಗ್ಯದ ಯೋಜನೆಗೆ ಸರ್ಕಾರವೇ ಕನ್ನ ಹಾಕುತ್ತಿದೆ ಎಂದಿದ್ದಾರೆ. ಅಕ್ಕಿ ನೀಡುವ ಬದಲು ಇಂದಿರಾ ಕಿಟ್ ನೀಡಿ ಅನ್ನಭಾಗ್ಯ ದುಡ್ಡು ಉಳಿಸಲು ಹೊರಟಿದೆ ಎಂದಿದ್ದಾರೆ.