ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾದ ವೇಗಿ ಯಶ್ ದಯಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಯುವತಿಯೊಬ್ಬಳು ಮಾಡಿದ ಗಂಭೀರ ಆರೋಪದ ಮೇಲೆ ಬಿಎನ್ಎಸ್ ಸೆಕ್ಷನ್ 69ರ ಅಡಿಯಲ್ಲಿ ಘಾಜಿಯಾಬಾದ್ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಕಚೇರಿಗೂ ಸಂತ್ರಸ್ತೆ ಪತ್ರದ ಮೂಲಕ ದೂರು ನೀಡಿದ್ದಳು. ಸಿಎಂ ಕಚೇರಿ ಸೂಚನೆ ಮೇರೆಗೆ ಪೊಲೀಸರು ದಯಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ದಯಾಳ್ ಅವರ ಮಾಜಿ ಪ್ರಿಯತಮೆ ಎನ್ನಲಾದ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾರೆ. ದಯಾಳ್ ಮತ್ತು ನಾನು ಕಳೆದ ಐದು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದೇವು. ಈ ಅವಧಿಯಲ್ಲಿ ದಯಾಳ್, ನನ್ನನ್ನು ಲೈಂಗಿಕವಾಗಿ ಬಳಸಿಕೊಂಡು, ಈಗ ದೂರ ಮಾಡಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.
ಈಗಾಗಲೇ ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದ ಪೊಲೀಸರು, ಇದೀಗ ದಯಾಳ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದರಿಂದ ದಯಾಳ್ಗೆ ಬಂಧನದ ಭೀತಿ ಎದುರಾಗಿದೆ.