ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಕಾಂಗ್ರೆಸ್ ಶಾಸಕ ಸಿ.ಪಿ ಯೋಗೇಶ್ವರ್ ವಿರುದ್ಧವೇ ಪತ್ನಿ ಹಾಗೂ ಪುತ್ರಿ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ ಅವರನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿ.ಪಿ ಯೋಗೇಶ್ವರ್ ಅವರ ಪತ್ನಿ ಮಾಳವಿಕಾ ಸೋಲಂಕಿ ಹಾಗೂ ಪುತ್ರಿ ನಿಶಾ ಭೇಟಿಯಾಗಿ ಈ ದೂರು ಸಲ್ಲಿಸಿದ್ದಾರೆ.
ಸುರ್ಜೇವಾಲಾ ಅವರಿಗೆ ಸಲ್ಲಿಸಿರುವಂ ದೂರಿನಲ್ಲಿ ಸಿ.ಪಿ ಯೋಗೇಶ್ವರ್ ತಮ್ಮ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆ. ಪದೇ ಪದೇ ಅವರು ಕೇಸ್ ಹಾಕಿ ಕೋರ್ಟ್, ಕಚೇರಿ ಅಲೆಸುತ್ತಿದ್ದಾರೆ. ನಾವು ಕಾನೂನಾತ್ಮಕವಾಗಿ ದೂರವಾಗಿಲ್ಲದ ಕಾರಣ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಹೀಗಾಗಿ ಸಿ.ಪಿ ಯೋಗೇಶ್ವರ್ ನೀಡುತ್ತಿರುವಂತ ಕಿರುಕುಳ ಸರಿಪಡಿಸುವಂತೆ ಮನವಿ ಮಾಡಿದ್ದಾರೆ.