ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಇಂದು ಕೋರ್ಟ್ ಗೆ ಹಾಜರಾಗಿ, ವಿಚಾರಣೆಯನ್ನು ಎದುರಿಸಿದರು. ಕೋರ್ಟ್ ಮುಗೀತಾ ಇದ್ದಂತೆ ಚಿತ್ರೀಕರಣಕ್ಕೆ ಹೊರಟು ನಿಂತಿದ್ದಾರೆ. ಕೋರ್ಟ್ ವಿಚಾರಣೆ ಮುಗಿಸಿಕೊಂಡು ತಡರಾತ್ರಿ, ಅಂದರೆ ಮಧ್ಯರಾತ್ರಿ 1 ಗಂಟೆಗೆ ಥೈಲ್ಯಾಂಡ್ ವಿಮಾನ ಏರಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ಕುರಿತಂತೆ ಜುಲೈ 10ರಂದು ದರ್ಶನ್ ಮತ್ತು ಗ್ಯಾಂಗ್ ಕೋರ್ಟ್ಗೆ ಹಾಜರಾಗಬೇಕಿತ್ತು. ಹಾಗಾಗಿ ಪವಿತ್ರಾ ಗೌಡ ಹೊರತು ಪಡಿಸಿ, ಎಲ್ಲರೂ ಕೋರ್ಟಿಗೆ ಹಾಜರಾಗಿದ್ದರು.
ಥೈಲ್ಯಾಂಡ್ ನಲ್ಲಿ ಶೂಟಿಂಗ್ ಮುಗೀತಾ ಇದ್ದಂತೆ, ಡೆವಿಲ್ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಯಲಿದೆಯಂತೆ. ಈಗಾಗಲೇ ಡಬ್ಬಿಂಗ್ ಕೆಲಸವನ್ನೂ ದರ್ಶನ್ ಮುಗಿಸಿದ್ದಾರೆ. ಸಣ್ಣಪುಟ್ಟ ಚಿತ್ರೀಕರಣ ಬಿಟ್ಟರೆ ಉಳಿದಂತ ಸಿನಿಮಾ ರೆಡಿಯಾಗಿದೆ ಎಂದು ಚಿತ್ರತಂಡದಿಂದ ಬಂದಿರುವ ಮಾಹಿತಿ.